ಇತ್ತೀಚಿನ ಸುದ್ದಿ
ರಾಮ ಮಂದಿರ ಶಿಲಾನ್ಯಾಸ: ಮಂಗಳೂರಿನಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ
August 3, 2020, 4:15 PM
ಮಂಗಳೂರು(reporterkarnataka news):
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ನಡೆಯಲಿರುವ ಹಿನ್ನಲೆಯಲ್ಲಿ ನಗರದಲ್ಲಿ144 ಸೆಕ್ಷನ್ ಜಾರಿಯಾಗಲಿದೆ.
ಮಂಗಳೂರು ಪೊಲೀಸ್ ಕಮೀಷನರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ನಡೆಯಲಿದ್ದು, ಭೂಮಿ ಪೂಜಾನಾ ದಿನದಂದು ಸಂಭ್ರಮಾಚರಣೆ ನಡೆಸಲು ಹಿಂದೂ ಸಂಘಟನೆಗಳು ತಯಾರಿ ನಡೆಸಿದ್ದರು. ಅದೇ ದಿನದಂದು ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆಗೂ ಸಿದ್ಧತೆ ಬಗ್ಗೆ ಮಾಹಿತಿ ನಗರ ಪೋಲಿಸ್ ಇಲಾಖೆಗೆ ದೊರಕಿತ್ತು.
ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ನಗರದಾದ್ಯಂತ ನಿಷೇಧಾಜ್ಞೆ ನಡೆಯಲಿದ್ದು, ನಿಷೇಧಾಜ್ಞೆ ಉಲ್ಲಂಘಿಸದಂತೆ ಖಡಕ್ ಆದೇಶ ನೀಡಿದ್ದಾರೆ.