12:43 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!

05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು