3:04 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!

05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು