2:37 AM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!

05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು