6:52 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!

05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು