3:31 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!

05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು