4:52 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!

05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು