6:45 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ ಸಂಪನ್ನ

14/01/2024, 23:17

ಮಂಗಳೂರು(reporterkarnataka.com): ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ನ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.
ನಗರದ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಕಶ್ಯರ್ಪ್ ಯುನೈಟೆಡ್,‌ ಕೊಡಿಯಾಲ್ ಸೂಪರ್ ಕಿಂಗ್ಸ್, ಯೋ ಜಿಎಸ್ ಬಿ ಸ್ಮ್ಯಾಶರ್ಸ್ ತಂಡಗಳ ಮಾಲೀಕರು, ಸಹ ಮಾಲೀಕರು ಉಪಸ್ಥಿತರಿದ್ದರು.

ಮುಂಬೈ, ಪುಣೆ, ಹೈದ್ರಾಬಾದ್, ಬೆಂಗಳೂರು, ಬೆಳಗಾಂ, ಉತ್ತರ ಕರ್ನಾಟಕ ಸಹಿತ ವಿವಿಧ ಭಾಗಗಳಿಂದ 155 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದರು. ಒಪನ್ ವಿಭಾಗ, ಜಂಬ್ಲಡ್, 40 ಹಾಗೂ 50 ವಯೋಮಿತಿಯ ಪ್ರತ್ಯೇಕ ವಿಭಾಗ, ಮಹಿಳಾ ವಿಭಾಗದಲ್ಲಿ ಪಂದ್ಯಾಟಗಳು ನಡೆಯಲಿವೆ.
ಜಿಎಸ್ ಬಿ ಸಮಾಜದಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಇದಾಗಿದ್ದು, ಎಂಟನೇ ವರ್ಷದ ಬಹುನಿರೀಕ್ಷಿತ ಜಿಪಿಎಲ್ ಉತ್ಸವದಲ್ಲಿ ಈ ಬಾರಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾಕೂಟ ಸೇರ್ಪಡೆಗೊಳಿಸಲಾಗಿದೆ. ಯು.ಎಸ್. ಮಲ್ಯ ಒಳಾಂಗಣ ಮೈದಾನದಲ್ಲಿ ಫೆಬ್ರವರಿ 24 ಹಾಗೂ 25 ರಂದು ಈ ಟೂರ್ನಮೆಂಟ್‌ ನಡೆಯಲಿದ್ದು, ವಿಜೇತರಿಗೆ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 25 ರಂದು ಜಿಪಿಎಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಪಿಎಲ್ ಉತ್ಸವ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ,‌ ಚೇತನ್ ಕಾಮತ್, ನರೇಶ್ ಪ್ರಭು, ಪ್ರಮುಖರಾದ ಸಂಜಯ್ ಪೈ, ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು