4:08 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ…

ಇತ್ತೀಚಿನ ಸುದ್ದಿ

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ ಸಂಪನ್ನ

14/01/2024, 23:17

ಮಂಗಳೂರು(reporterkarnataka.com): ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ನ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.
ನಗರದ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಕಶ್ಯರ್ಪ್ ಯುನೈಟೆಡ್,‌ ಕೊಡಿಯಾಲ್ ಸೂಪರ್ ಕಿಂಗ್ಸ್, ಯೋ ಜಿಎಸ್ ಬಿ ಸ್ಮ್ಯಾಶರ್ಸ್ ತಂಡಗಳ ಮಾಲೀಕರು, ಸಹ ಮಾಲೀಕರು ಉಪಸ್ಥಿತರಿದ್ದರು.

ಮುಂಬೈ, ಪುಣೆ, ಹೈದ್ರಾಬಾದ್, ಬೆಂಗಳೂರು, ಬೆಳಗಾಂ, ಉತ್ತರ ಕರ್ನಾಟಕ ಸಹಿತ ವಿವಿಧ ಭಾಗಗಳಿಂದ 155 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದರು. ಒಪನ್ ವಿಭಾಗ, ಜಂಬ್ಲಡ್, 40 ಹಾಗೂ 50 ವಯೋಮಿತಿಯ ಪ್ರತ್ಯೇಕ ವಿಭಾಗ, ಮಹಿಳಾ ವಿಭಾಗದಲ್ಲಿ ಪಂದ್ಯಾಟಗಳು ನಡೆಯಲಿವೆ.
ಜಿಎಸ್ ಬಿ ಸಮಾಜದಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಇದಾಗಿದ್ದು, ಎಂಟನೇ ವರ್ಷದ ಬಹುನಿರೀಕ್ಷಿತ ಜಿಪಿಎಲ್ ಉತ್ಸವದಲ್ಲಿ ಈ ಬಾರಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾಕೂಟ ಸೇರ್ಪಡೆಗೊಳಿಸಲಾಗಿದೆ. ಯು.ಎಸ್. ಮಲ್ಯ ಒಳಾಂಗಣ ಮೈದಾನದಲ್ಲಿ ಫೆಬ್ರವರಿ 24 ಹಾಗೂ 25 ರಂದು ಈ ಟೂರ್ನಮೆಂಟ್‌ ನಡೆಯಲಿದ್ದು, ವಿಜೇತರಿಗೆ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 25 ರಂದು ಜಿಪಿಎಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಪಿಎಲ್ ಉತ್ಸವ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ,‌ ಚೇತನ್ ಕಾಮತ್, ನರೇಶ್ ಪ್ರಭು, ಪ್ರಮುಖರಾದ ಸಂಜಯ್ ಪೈ, ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು