1:01 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ ಸಂಪನ್ನ

14/01/2024, 23:17

ಮಂಗಳೂರು(reporterkarnataka.com): ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ನ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.
ನಗರದ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಕಶ್ಯರ್ಪ್ ಯುನೈಟೆಡ್,‌ ಕೊಡಿಯಾಲ್ ಸೂಪರ್ ಕಿಂಗ್ಸ್, ಯೋ ಜಿಎಸ್ ಬಿ ಸ್ಮ್ಯಾಶರ್ಸ್ ತಂಡಗಳ ಮಾಲೀಕರು, ಸಹ ಮಾಲೀಕರು ಉಪಸ್ಥಿತರಿದ್ದರು.

ಮುಂಬೈ, ಪುಣೆ, ಹೈದ್ರಾಬಾದ್, ಬೆಂಗಳೂರು, ಬೆಳಗಾಂ, ಉತ್ತರ ಕರ್ನಾಟಕ ಸಹಿತ ವಿವಿಧ ಭಾಗಗಳಿಂದ 155 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದರು. ಒಪನ್ ವಿಭಾಗ, ಜಂಬ್ಲಡ್, 40 ಹಾಗೂ 50 ವಯೋಮಿತಿಯ ಪ್ರತ್ಯೇಕ ವಿಭಾಗ, ಮಹಿಳಾ ವಿಭಾಗದಲ್ಲಿ ಪಂದ್ಯಾಟಗಳು ನಡೆಯಲಿವೆ.
ಜಿಎಸ್ ಬಿ ಸಮಾಜದಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಇದಾಗಿದ್ದು, ಎಂಟನೇ ವರ್ಷದ ಬಹುನಿರೀಕ್ಷಿತ ಜಿಪಿಎಲ್ ಉತ್ಸವದಲ್ಲಿ ಈ ಬಾರಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾಕೂಟ ಸೇರ್ಪಡೆಗೊಳಿಸಲಾಗಿದೆ. ಯು.ಎಸ್. ಮಲ್ಯ ಒಳಾಂಗಣ ಮೈದಾನದಲ್ಲಿ ಫೆಬ್ರವರಿ 24 ಹಾಗೂ 25 ರಂದು ಈ ಟೂರ್ನಮೆಂಟ್‌ ನಡೆಯಲಿದ್ದು, ವಿಜೇತರಿಗೆ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 25 ರಂದು ಜಿಪಿಎಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಪಿಎಲ್ ಉತ್ಸವ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ,‌ ಚೇತನ್ ಕಾಮತ್, ನರೇಶ್ ಪ್ರಭು, ಪ್ರಮುಖರಾದ ಸಂಜಯ್ ಪೈ, ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು