7:19 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ ಸಂಪನ್ನ

14/01/2024, 23:17

ಮಂಗಳೂರು(reporterkarnataka.com): ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ನ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.
ನಗರದ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಕಶ್ಯರ್ಪ್ ಯುನೈಟೆಡ್,‌ ಕೊಡಿಯಾಲ್ ಸೂಪರ್ ಕಿಂಗ್ಸ್, ಯೋ ಜಿಎಸ್ ಬಿ ಸ್ಮ್ಯಾಶರ್ಸ್ ತಂಡಗಳ ಮಾಲೀಕರು, ಸಹ ಮಾಲೀಕರು ಉಪಸ್ಥಿತರಿದ್ದರು.

ಮುಂಬೈ, ಪುಣೆ, ಹೈದ್ರಾಬಾದ್, ಬೆಂಗಳೂರು, ಬೆಳಗಾಂ, ಉತ್ತರ ಕರ್ನಾಟಕ ಸಹಿತ ವಿವಿಧ ಭಾಗಗಳಿಂದ 155 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದರು. ಒಪನ್ ವಿಭಾಗ, ಜಂಬ್ಲಡ್, 40 ಹಾಗೂ 50 ವಯೋಮಿತಿಯ ಪ್ರತ್ಯೇಕ ವಿಭಾಗ, ಮಹಿಳಾ ವಿಭಾಗದಲ್ಲಿ ಪಂದ್ಯಾಟಗಳು ನಡೆಯಲಿವೆ.
ಜಿಎಸ್ ಬಿ ಸಮಾಜದಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಇದಾಗಿದ್ದು, ಎಂಟನೇ ವರ್ಷದ ಬಹುನಿರೀಕ್ಷಿತ ಜಿಪಿಎಲ್ ಉತ್ಸವದಲ್ಲಿ ಈ ಬಾರಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾಕೂಟ ಸೇರ್ಪಡೆಗೊಳಿಸಲಾಗಿದೆ. ಯು.ಎಸ್. ಮಲ್ಯ ಒಳಾಂಗಣ ಮೈದಾನದಲ್ಲಿ ಫೆಬ್ರವರಿ 24 ಹಾಗೂ 25 ರಂದು ಈ ಟೂರ್ನಮೆಂಟ್‌ ನಡೆಯಲಿದ್ದು, ವಿಜೇತರಿಗೆ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 25 ರಂದು ಜಿಪಿಎಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಪಿಎಲ್ ಉತ್ಸವ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ,‌ ಚೇತನ್ ಕಾಮತ್, ನರೇಶ್ ಪ್ರಭು, ಪ್ರಮುಖರಾದ ಸಂಜಯ್ ಪೈ, ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು