1:00 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ ಸಂಪನ್ನ

14/01/2024, 23:17

ಮಂಗಳೂರು(reporterkarnataka.com): ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ನ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.
ನಗರದ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಕಶ್ಯರ್ಪ್ ಯುನೈಟೆಡ್,‌ ಕೊಡಿಯಾಲ್ ಸೂಪರ್ ಕಿಂಗ್ಸ್, ಯೋ ಜಿಎಸ್ ಬಿ ಸ್ಮ್ಯಾಶರ್ಸ್ ತಂಡಗಳ ಮಾಲೀಕರು, ಸಹ ಮಾಲೀಕರು ಉಪಸ್ಥಿತರಿದ್ದರು.

ಮುಂಬೈ, ಪುಣೆ, ಹೈದ್ರಾಬಾದ್, ಬೆಂಗಳೂರು, ಬೆಳಗಾಂ, ಉತ್ತರ ಕರ್ನಾಟಕ ಸಹಿತ ವಿವಿಧ ಭಾಗಗಳಿಂದ 155 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದರು. ಒಪನ್ ವಿಭಾಗ, ಜಂಬ್ಲಡ್, 40 ಹಾಗೂ 50 ವಯೋಮಿತಿಯ ಪ್ರತ್ಯೇಕ ವಿಭಾಗ, ಮಹಿಳಾ ವಿಭಾಗದಲ್ಲಿ ಪಂದ್ಯಾಟಗಳು ನಡೆಯಲಿವೆ.
ಜಿಎಸ್ ಬಿ ಸಮಾಜದಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಇದಾಗಿದ್ದು, ಎಂಟನೇ ವರ್ಷದ ಬಹುನಿರೀಕ್ಷಿತ ಜಿಪಿಎಲ್ ಉತ್ಸವದಲ್ಲಿ ಈ ಬಾರಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾಕೂಟ ಸೇರ್ಪಡೆಗೊಳಿಸಲಾಗಿದೆ. ಯು.ಎಸ್. ಮಲ್ಯ ಒಳಾಂಗಣ ಮೈದಾನದಲ್ಲಿ ಫೆಬ್ರವರಿ 24 ಹಾಗೂ 25 ರಂದು ಈ ಟೂರ್ನಮೆಂಟ್‌ ನಡೆಯಲಿದ್ದು, ವಿಜೇತರಿಗೆ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 25 ರಂದು ಜಿಪಿಎಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಪಿಎಲ್ ಉತ್ಸವ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ,‌ ಚೇತನ್ ಕಾಮತ್, ನರೇಶ್ ಪ್ರಭು, ಪ್ರಮುಖರಾದ ಸಂಜಯ್ ಪೈ, ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು