3:02 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ ಸಂಪನ್ನ

14/01/2024, 23:17

ಮಂಗಳೂರು(reporterkarnataka.com): ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ನ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.
ನಗರದ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಕಶ್ಯರ್ಪ್ ಯುನೈಟೆಡ್,‌ ಕೊಡಿಯಾಲ್ ಸೂಪರ್ ಕಿಂಗ್ಸ್, ಯೋ ಜಿಎಸ್ ಬಿ ಸ್ಮ್ಯಾಶರ್ಸ್ ತಂಡಗಳ ಮಾಲೀಕರು, ಸಹ ಮಾಲೀಕರು ಉಪಸ್ಥಿತರಿದ್ದರು.

ಮುಂಬೈ, ಪುಣೆ, ಹೈದ್ರಾಬಾದ್, ಬೆಂಗಳೂರು, ಬೆಳಗಾಂ, ಉತ್ತರ ಕರ್ನಾಟಕ ಸಹಿತ ವಿವಿಧ ಭಾಗಗಳಿಂದ 155 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದರು. ಒಪನ್ ವಿಭಾಗ, ಜಂಬ್ಲಡ್, 40 ಹಾಗೂ 50 ವಯೋಮಿತಿಯ ಪ್ರತ್ಯೇಕ ವಿಭಾಗ, ಮಹಿಳಾ ವಿಭಾಗದಲ್ಲಿ ಪಂದ್ಯಾಟಗಳು ನಡೆಯಲಿವೆ.
ಜಿಎಸ್ ಬಿ ಸಮಾಜದಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಇದಾಗಿದ್ದು, ಎಂಟನೇ ವರ್ಷದ ಬಹುನಿರೀಕ್ಷಿತ ಜಿಪಿಎಲ್ ಉತ್ಸವದಲ್ಲಿ ಈ ಬಾರಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾಕೂಟ ಸೇರ್ಪಡೆಗೊಳಿಸಲಾಗಿದೆ. ಯು.ಎಸ್. ಮಲ್ಯ ಒಳಾಂಗಣ ಮೈದಾನದಲ್ಲಿ ಫೆಬ್ರವರಿ 24 ಹಾಗೂ 25 ರಂದು ಈ ಟೂರ್ನಮೆಂಟ್‌ ನಡೆಯಲಿದ್ದು, ವಿಜೇತರಿಗೆ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 25 ರಂದು ಜಿಪಿಎಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಜಿಪಿಎಲ್ ಉತ್ಸವ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ,‌ ಚೇತನ್ ಕಾಮತ್, ನರೇಶ್ ಪ್ರಭು, ಪ್ರಮುಖರಾದ ಸಂಜಯ್ ಪೈ, ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು