10:37 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು