4:35 PM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು