12:52 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು