7:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು