5:18 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು