10:53 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು