8:29 PM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು