5:51 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ

01/10/2023, 22:51

ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ.
ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಸಿಬ್ಬಂದಿ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ.ಗಳ ಮೌಲ್ಯದ ಕಾಪರ್ ಸಲ್ಫೈಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃಷಿ ಜಾರಿದಳ ಹಾಗೂ ಎಲ್ಲಾ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು