10:51 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು