2:24 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು