7:47 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು