7:23 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು