12:50 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು