1:39 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು