6:28 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು