2:57 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು