4:36 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಬಂಟ್ವಾಳದ ಅಮ್ಮೆಮಾರು ಸಮೀಪದ ಗುಡ್ಡ ಕುಸಿತ: ಮನೆಗೆ ತೀವ್ರ ಹಾನಿ, ಬಿರುಕು ಬಿಟ್ಟ ಗೋಡೆ; ಆತಂಕ ಹೆಚ್ಚಿಸಿದ ಮಳೆ

04/07/2022, 10:10

ಸಾಂದರ್ಭಿಕ ಚಿತ್ರ
ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಮನೆಯೊಂದು ಅಪಾಯಕ್ಕೆ ಸಿಲುಕಿದೆ.

ಅಮ್ಮೆಮಾರು ಸಮೀಪದ ಪದೆಂಜಾರ್ ಎಂಬಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ನಾರಾಯಣ ಮುಕಾರಿ ಎಂಬವರ ಮನೆ ಅಪಾಯಕ್ಕೆ ಸಿಲುಕಿದೆ. ಮನೆಯ ಹಿಂಭಾಗದ ಒಂದು ಪಾರ್ಶ್ವದ ಮಣ್ಣು ಸಂಪೂರ್ಣ ಕುಸಿದು ಮನೆ ಅಪಾಯಕ್ಕೆ ಸಿಲುಕಿದೆ. ಭೂ ಕುಸಿತಕ್ಕೆ ಹಿಂಭಾಗದ ಕಲ್ಲುಗಳು ಕೆಲಭಾಗದಲ್ಲಿ ಹರಿಯುತ್ತಿರುವ ತೊರೆ ಪಾಲಾಗಿದೆ. ಗೋಡೆಗಳು ಬಿರುಕು ಬಿಟ್ಟಿದ್ದು ಇದೇ ರೀತಿ ಮಳೆ ಸುರಿದರೆ ಇಡೀ ಮನೆಯೇ ಧರಶಾಹಿಯಾಗುವ ಆತಂಕ ಎದುರಾಗಿದೆ.

ಮುಕಾರಿ ಅವರದ್ದು ಅವಿಭಕ್ತ ಕುಟುಂಬವಾಗಿದ್ದು, ಮಕ್ಕಳು ಹಿರಿಯರು ಸೇರಿ 15 ಮಂದಿ ಮನೆಯಲ್ಲಿ ವಾಸವಾಗಿದ್ದಾರೆ.

ನಿರಂತರ ಮಳೆಯಿಂದಾಗಿ ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಾಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು