9:46 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್

24/11/2022, 12:10

ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನ ಕುದ್ರೋಳಿ ಬೆಂಗ್ರೆಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರಕಾರವು ಮೀನುಗಾರರ ಮಕ್ಕಳಿಗೆ ವಿಧ್ಯಾನಿಧಿ ಯೋಜನೆ ರೂಪಿಸಿದ್ದು ಅದರ ಉಪಯೋಗ ಪಡೆಯುವಂತೆ ಶಾಸಕರು ನುಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು