5:33 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು