9:55 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು