9:33 PM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು