10:56 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು