9:05 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು