12:24 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು