12:28 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಭಾರತಕ್ಕೆ ಕೊರೊನಾ 3ನೇ ಅಲೆ; ನೋ ಚಾನ್ಸ್ ಎನ್ನುತ್ತಾರೆ ಖ್ಯಾತ ವೈದ್ಯ ಡಾ. ರಾಜು ಕೃಷ್ಣಮೂರ್ತಿ

04/06/2021, 07:50

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಆರ್ಭಟ ತಗ್ಗುವ ಮುನ್ನವೇ 3ನೇ ಅಲೆಯ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತದೆ. ಮಕ್ಕಳನ್ನೇ ಟಾರ್ಗೆಟ್ ಮಾಡಿ ಬರುತ್ತದೆ. ಅಕ್ಟೋಬರ್ ನಲ್ಲೇ ಶುರುವಾಗುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ರಾಜ್ಯದ ಹೆಮ್ಮೆಯ ವೈದ್ಯರಾದ ಡಾ. ರಾಜು ಕೃಷ್ಣಮೂರ್ತಿ ಏನು ಹೇಳುತ್ತಾರೆ ಎಂಬುದನ್ನು ಓದಿ ನೋಡೋಣ.

ಡಾ. ರಾಜು ಪ್ರಕಾರ ಇದೊಂದು ಹೆದರಿಸುವ ತಂತ್ರವಾಗಿದೆಯಂತೆ. ಅವರು ಹೇಳುವ ಪ್ರಕಾರ 3ನೇ ಅಲೆ ನೋ ಚಾನ್ಸ್. ಜನರಲ್ಲಿ ಈಗಾಗಲೇ ಗಾರ್ಡ್ ಇಮ್ಯುನಿಟಿ ಜಾಸ್ತಿಯಾಗಿದೆಯಂತೆ. ಜನ ಸಮುದಾಯಕ್ಕೆ ರೋಗ ನಿರೋಧಕ ಶಕ್ತಿ ಬಂದಿರುವುದರಿಂದ 3ನೇ ಅಲೆ ಇತ್ತ ಸುಳಿಯದು ಎಂಬ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ.

ಡಾ. ರಾಜು ಮತ್ತೊಂದು ಕಿವಿಮಾತು ಹೇಳುತ್ತಾರೆ. ಅದೇನೆಂದರೆ ಮೂರನೇ ಅಲೆ ಬಾರದು ಎಂದು ನಿರ್ಲಕ್ಷ್ಯ ಬೇಡ. ಸಾಕಷ್ಟು ತರಕಾರಿ, ಸೊಪ್ಪು, ಹಣ್ಣು ಹಂಪಲು ತಿಂದು ವ್ಯಾಯಾಮ ಮಾಡಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ ಎನ್ನುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು