8:34 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಬಿಹಾರದ ಚುನಾವಣೆ ಪ್ರಣಾಳಿಕೆಯಂತಿದೆ: ಕೇಂದ್ರ ಬಜೆಟ್ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

01/02/2025, 18:14

ಬೆಳಗಾವಿ(reporterkarnataka.com): ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು