7:19 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಿಹಾರದ ಚುನಾವಣೆ ಪ್ರಣಾಳಿಕೆಯಂತಿದೆ: ಕೇಂದ್ರ ಬಜೆಟ್ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

01/02/2025, 18:14

ಬೆಳಗಾವಿ(reporterkarnataka.com): ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು