6:54 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು

28/11/2023, 12:31

ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗೂ ಸೌಜನ್ಯ ಎಂಬುವರು ಕೆಲಸ ಮುಗಿಸಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಯಾರೋ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅವರನ್ನು ತಡೆದು ನೀವು ಹಿಂದೂ- ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಹೊಯ್ಸಳ ವಾಹನ ಬಂದಿದ್ದು, ಅವರನ್ನು
ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು