2:36 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು

28/11/2023, 12:31

ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗೂ ಸೌಜನ್ಯ ಎಂಬುವರು ಕೆಲಸ ಮುಗಿಸಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಯಾರೋ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅವರನ್ನು ತಡೆದು ನೀವು ಹಿಂದೂ- ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಹೊಯ್ಸಳ ವಾಹನ ಬಂದಿದ್ದು, ಅವರನ್ನು
ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು