4:59 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು

28/11/2023, 12:31

ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗೂ ಸೌಜನ್ಯ ಎಂಬುವರು ಕೆಲಸ ಮುಗಿಸಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಯಾರೋ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅವರನ್ನು ತಡೆದು ನೀವು ಹಿಂದೂ- ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಹೊಯ್ಸಳ ವಾಹನ ಬಂದಿದ್ದು, ಅವರನ್ನು
ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು