6:33 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು