11:12 AM Wednesday2 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು