2:50 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು