8:18 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು