11:37 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು