10:48 AM Wednesday3 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು