11:34 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು